ಐಷಾರಾಮಿ ತೇಜಸ್ ಎಕ್ಸ್‌ಪ್ರೆಸ್‌ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಅತ್ಯಾಧುನಿಕ ಸವಲತ್ತಗಳನ್ನು ಹೊಂದಿದ್ದ ತೇಜಸ್ ಎಕ್ಸ್‌ಪ್ರೆಸ್‌ ರೈಲು ಮೇ 22ರಂದು ಮುಂಬೈನಿಂದ ಗೋವಾಕ್ಕೆ ಮೊದಲ ಪ್ರಯಾಣ ಆರಂಭಿಸಲಿತ್ತು ಈ ಮಧ್ಯೆ ರೈಲಿಗೆ...
ತೇಜಸ್ ಎಕ್ಸ್‌ಪ್ರೆಸ್‌ ರೈಲು
ತೇಜಸ್ ಎಕ್ಸ್‌ಪ್ರೆಸ್‌ ರೈಲು
Updated on
ಮುಂಬೈ: ಅತ್ಯಾಧುನಿಕ ಸವಲತ್ತಗಳನ್ನು ಹೊಂದಿದ್ದ ತೇಜಸ್ ಎಕ್ಸ್‌ಪ್ರೆಸ್‌ ರೈಲು ಮೇ 22ರಂದು ಮುಂಬೈನಿಂದ ಗೋವಾಕ್ಕೆ ಮೊದಲ ಪ್ರಯಾಣ ಆರಂಭಿಸಲಿತ್ತು ಈ ಮಧ್ಯೆ ರೈಲಿಗೆ ದುಷ್ಕರ್ಮಿಗಳು ಕಲ್ಲೆಸೆದು, ಕಿಟಕಿ ಗಾಜನ್ನು ಪುಡಿ ಮಾಡಿದ್ದಾರೆ. 
ತೇಜಸ್ ಎಕ್ಸ್‌ಪ್ರೆಸ್‌ ರೈಲಿನ ಪ್ರತಿ ಬೋಗಿಯಲ್ಲೂ ಟಿವಿ, ಕಾಫಿ ಮತ್ತು ಟೀ ಯಂತ್ರಗಳು ಸೇರಿದಂತೆ ಅತ್ಯಾಧುನಿಕ ಸವಲತ್ತುಗಳನ್ನು ಅಳವಡಿಸಲಾಗಿದೆ. ರೈಲು ಸೋಮವಾರ ಮೊದಲ ಪ್ರಯಾಣ ಆರಂಭಿಸಲಿದ್ದು ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ನಿಂದ ಈ ರೈಲು ಹೊರಡಲಿದೆ. 
ಕಳೆದ ಬಜೆಟ್ ನಲ್ಲಿ ಮುಂಬೈ-ಗೋವಾ ನಡುವೆ ತೇಜಸ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭಿಸುವ ಬಗ್ಗೆ ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ ದೆಹಲಿ-ಚಂಢೀಗಡ ಮಾರ್ಗದಲ್ಲಿ ತೇಜಸ್ ಎಕ್ಸ್‌ಪ್ರೆಸ್‌ ಸಂಚರಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com