ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಸೀತಾರಾಮ ಯೆಚೂರಿ

ರಾಜ್ಯಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವುದಿಲ್ಲ ಎಂದು ಸಿಪಿಐ(ಎಂ) ಸೀತಾರಾಮ ಯೆಚೂರಿ ಹೇಳಿದ್ದಾರೆ...
ಸೀತಾರಾಮ ಯಚೂರಿ
ಸೀತಾರಾಮ ಯಚೂರಿ
ಅಗರ್ತಲಾ: ರಾಜ್ಯಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವುದಿಲ್ಲ ಎಂದು ಸಿಪಿಐ(ಎಂ) ಸೀತಾರಾಮ ಯೆಚೂರಿ ಹೇಳಿದ್ದಾರೆ.
ಪಕ್ಷದ ನೀತಿ ನಿಯಮದ ಅನ್ವಯ ಮೂರು ಬಾರಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ, ಹೀಗಾಗಿ  ನಾನು ಈ ರಾಜ್ಯ ಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಪಾಲಿಟ್ ಬ್ಯುರೋ ಸದಸ್ಯ ಪ್ರಕಾಶ್ ಕಾರಟ್ ಮತ್ತು ಸೀತಾರಾಮ ಯೆಚೂರಿ ಅಗರ್ತಲಾದಲ್ಲಿ ನಡೆದ ಎರಡು ದಿನಗಳ ಸಮಿತಿ ಸಭೆಯಲ್ಲಿ  ಮಾತನಾಡಿದ ಅವರು  ಬಿಜೆಪಿ ಸದ್ಯ ತ್ರಿಪುರಾ ವನ್ನು ಟಾರ್ಗೆಟ್ ಮಾಡಿದೆ. ಹಣ ಮತ್ತು ಅಧಿಕಾರವನ್ನು ದುರಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. 60 ಕ್ಷೇತ್ರಗಳಿಂದ ತಮ್ಮ ಪಕ್ಷ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com