ಏಪ್ರಿಲ್ 9 ರಂದು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಮತದಾನದ ದಿನ ಭದ್ರತಾ ಕಾರ್ಯಕ್ಕೆ ನಿಯೋಜಿತರಾಗಿದ್ದ ಮೇ. ಗೊಗೋಯ್ ಮತ್ತು ಅವರ ತಂಡ ಕಲ್ಲು ತೂರಾಟ ನಡೆಸುತ್ತಿದ್ದವರಿಂದ ರಕ್ಷಣೆ ಪಡೆಯುವ ಸಲುವಾಗಿ ಕಾಶ್ಮೀರಿ ಯುವಕನೊಬ್ಬನನ್ನು ಜೀಪ್ ಮುಂಭಾಗಕ್ಕೆ ಕಟ್ಟಿದ್ದ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಆ ನಂತರ ಸೇನೆಯ ಕ್ರಮವನ್ನು ಹಲವರು ಟೀಕಿಸಿದ್ದರು.