ಸೇನಾ ಸಾಮರ್ಥ್ಯ ಸಾಬೀತಾಗಿದೆ, ಪಾಕ್ ವಿರುದ್ಧ ಇದೀಗ ಕೇಂದ್ರ ಸಾಮರ್ಥ್ಯ ಪ್ರದರ್ಶಿಸಬೇಕು: ಶಿವಸೇನೆ

ಭಾರತದ ಗಡಿ ನುಸುಳಲು ನೆರವಾಗುತ್ತಿದ್ದ ಗಡಿ ನಿಯಂತ್ರಣ ರೇಖೆ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಸೇನೆ ತನ್ನ ಸಾಮರ್ಥ್ಯವೇನು ಎಂಬುದನ್ನು ಸಾಬೀತು ಪಡಿಸಿದೆ. ಇದೀಗ ಕೇಂದ್ರ ಪಾಕಿಸ್ತಾನದ ವಿರುದ್ಧ ಕಠಿಣ ಕೈಗೊಳ್ಳುವ ಮೂಲಕ...
ಶಿವಸೇನೆ (ಸಂಗ್ರಹ ಚಿತ್ರ)
ಶಿವಸೇನೆ (ಸಂಗ್ರಹ ಚಿತ್ರ)
Updated on
ನವದೆಹಲಿ: ಭಾರತದ ಗಡಿ ನುಸುಳಲು ನೆರವಾಗುತ್ತಿದ್ದ ಗಡಿ ನಿಯಂತ್ರಣ ರೇಖೆ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಸೇನೆ ತನ್ನ ಸಾಮರ್ಥ್ಯವೇನು ಎಂಬುದನ್ನು ಸಾಬೀತು ಪಡಿಸಿದೆ. ಇದೀಗ ಕೇಂದ್ರ ಪಾಕಿಸ್ತಾನದ ವಿರುದ್ಧ ಕಠಿಣ ಕೈಗೊಳ್ಳುವ ಮೂಲಕ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ ಎಂದು ಶಿವಸೇನೆ ಬುಧವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕ ಮನೀಷ ಕಯಾಂಡೆ, ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಚೋದಿಸುತ್ತಿದ್ದು, ಸೇನೆ ಇದೇ ರೀತಿ ಮತ್ತಷ್ಟು ಉಗ್ರರ ನೆಲೆಗಳನ್ನು ನಾಶಪಡಿಸಬೇಕು ಎಂದು ಹೇಳಿದ್ದಾರೆ. 
ಧೈರ್ಯ ಹಾಗೂ ವೀರತ್ವದ ಕ್ರಮಕ್ಕೆ ಸೇನೆಗೆ ಶುಭಾಶಯಗಳನ್ನು ಹೇಳಲೇಬೇಕು. ಸೇನೆ ತಾನೇನು ಎಂಬುದನ್ನು ಸಾಬೀತು ಪಡಿಸಿದೆ. ಇದೀಗ ಕೇಂದ್ರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಮೂಲಕ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಬೇಕಿದೆ. ಪಾಕಿಸ್ತಾನದ ಮತ್ತಷ್ಟು ಉಗ್ರ ನೆಲೆಗಳನ್ನು ಧ್ವಂಸಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com