ರಸ್ತೆ ಕಾಮಗಾರಿ ನಡೆಸುತ್ತಿದ್ದ ಜನರಿಗೆ ಸಿಆರ್ ಪಿಎಫ್ ಪಡೆ ಭದ್ರತೆ ನೀಡುತ್ತಿತ್ತು. ಈ ವೇಳೆ ಭದ್ರತಾ ಪಡೆಯ ನಾಯಕತ್ವವನ್ನು ಜಯಾನ್ ವಿಶ್ವನಾಥ್ ಅವರು ವಹಿಸಿದ್ದರು. ದಾಳಿ ವೇಳೆ ಸಮರ್ಪಕವಾಗಿ ನಾಯಕತ್ವವನ್ನು ನಿಭಾಯಿಸದ ಕಾರಣ ಇದೀಗ ವಿಶ್ವನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, 74ನೇ ಬೆಟಾಲಿಯನ್ ಕಮಾಂಡಿಂಗ್ ಅಧಿಕಾರಿ ಕಮಾಂಡೆಂಟ್ ಫಿರೋಜ್ ಕುಜರ್ ಅವರನ್ನು ಸಹ ಸಶಸ್ತ್ರ ಪಡೆಯಿಂದ ಎತ್ತಂಗಡಿ ಮಾಡಲಾಗಿದೆ.