ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ನಳಿನ್ ಕೊಲ್ಹಿ ಅವರು, ಸಹರನಾಪುರದಲ್ಲಿ ಶಾಂತಿ ಮರುಸ್ಥಾಪನೆಯಾಗಬೇಕೆಂಬುದು ನಮ್ಮ ಉದ್ದೇಶವಾಗಿದೆ. ಯಾರಿಗೂ ನೋವುಗಳು ಹಾಗೂ ಸಂಕಷ್ಟಗಳು ಎದುರಾಗಬಾರದು. ಪ್ರಸ್ತುತ ಸಹರನಾಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಇಂತಹ ಪರಿಸ್ಥಿತಿಯಲ್ಲಿ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಬಾರದು. ಪ್ರಸ್ತುತ ಇರುವ ಪರಿಸ್ಥಿತಿಯಲ್ಲಿ ಮಾಯಾವತಿಯವರು ಶಾಂತಿ ಮರುಸ್ಥಾಪನೆ ಕುರಿತಂತೆ ಚಿಂತನೆ ನಡೆಸಬೇಕೇ ಹೊರತು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳ್ಳುವಂತಹ ಮಾತುಗಳನ್ನು ಆಡಬಾರದು ಎಂದು ಹೇಳಿದ್ದಾರೆ.