ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಭಾರತದ ಮೇಲೆ ದಾಳಿಗೆ 21 ಲಷ್ಕರ್ ಉಗ್ರ ಸಂಚು: ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್

ಭಾರತದ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು 2-21 ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಹೈಅಲರ್ಟ್...
Published on
ನವದೆಹಲಿ: ಭಾರತದ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು 2-21 ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರು ಈಗಾಗಲೇ ಭಾರತವನ್ನು ಪ್ರವೇಶ ಮಾಡಿದ್ದು, ಗುಂಪುಗಳನ್ನು ಮಾಡಿಕೊಂಡಿರುವ ಉಗ್ರರು ಮುಂಬೈ, ದೆಹಲಿ, ಪಂಜಾಬ್ ಹಾಗೂ ರಾಜಸ್ತಾನ ರಾಜ್ಯಗಳಿಗೆ ಹೋಗಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ವರದಿಗಳು ತಿಳಿಸಿವೆ. 
ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ಈಗಾಗಲೇ ಅಧಿಕಾರಿಗಳಿಗೆ ಸಲಹೆ ಹಾಗೂ ಎಚ್ಚರಿಕೆಗಳನ್ನು ನೀಡಿದ್ದಾರೆ. ಅಲ್ಲದೆ, ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ರೈಲ್ವೇ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಪ್ರತಿಷ್ಠಿತ ಹೋಟೆಲ್ ಹಾಗೂ ಜನನಿಬಿಡ ಪ್ರದೇಶಗಳಾದ ಪ್ರವಾಸಿ ತಾಣಗಳು, ಮಾರುಕಟ್ಟೆ, ಧಾರ್ಮಿಕ ಕ್ಷೇತ್ರಗಳು, ಕ್ರೀಡಾಂಗಣಗಳಲ್ಲಿ ತೀವ್ರ ತಪಾಸಣೆಗಳನ್ನು ನಡೆಸುತ್ತಿದ್ದಾರೆಂದು ಮೂಲಗಳಉ ತಿಳಿಸಿವೆ. 
ಕೆಲ ದಿನಗಳ ಹಿಂದಷ್ಟೇ ಅಮೆರಿಕ ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಕೆಯೊಂದನ್ನು ನೀಡಿದ್ದರು. ಪಾಕಿಸ್ತಾನ ಮೂಲಕ ಉಗ್ರ ಸಂಘಟನೆಗಳು ಭಾರತ ವಿರುದ್ಧ ಸಂಚುಗಳನ್ನು ರೂಪಿಸುತ್ತಿದ್ದು, ಉಗ್ರರನ್ನು ಮಟ್ಟಹಾಕುವಲ್ಲಿ ಇಸ್ಲಾಮಾಬಾದ್ ವಿಫಲವಾಗಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com