ಸೋನಿಯಾ ಗಾಂಧಿ ಭೋಜನ ಕೂಟಕ್ಕೆ ಗೈರು: ಪ್ರಧಾನಿಯೊಂದಿಗೆ ನಿತೀಶ್ ಕುಮಾರ್ ಲಂಚ್!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಏರ್ಪಡಿಸಿದ್ದ ಭೋಜನಕೂಟಕ್ಕೆ ಗೈರಾಗಿದ್ದರು, ಆದರೆ ಇಂದು ಪ್ರಧಾನಿ ...
ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್
ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್
Updated on
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಏರ್ಪಡಿಸಿದ್ದ ಭೋಜನಕೂಟಕ್ಕೆ ಗೈರಾಗಿದ್ದರು, ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಧ್ಯಾಹ್ನದ ಊಟಕ್ಕೆ ಹಾದರಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಭೋಜನದ ನಂತರ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ಮಾಡಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಮಧ್ಯಾಹ್ನ ಭೇಟಿಯಾಗಿದ್ದಾರೆ ಎಂದು ಪ್ರಧಾನಿ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ 17 ವಿರೋಧಪಕ್ಷಗಳ ಮುಖಂಡರಿಗೆ ಭೋಜನಕೂಟ ಏರ್ಪಡಿಸಿದ್ದರು. ಈ ಸಭೆಗೆ ನಿತೀಶ್ ಕುಮಾರ್ ಜೆಡಿಯು ಉಪಾಧ್ಯಕ್ಷ ಶರದ್ ಯಾದವ್ ರನ್ನು ತಮ್ಮ ಪ್ರತಿನಿಧಿಯನ್ನಾಗಿ ಕಳುಹಿಸಿದ್ದರು. ಮುಂಬರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಸೋನಿಯಾ ಈ ಭೋಜನಕೂಟ ಏರ್ಪಡಿಸಿದ್ದರು.
ನಾನು ಈಗಾಗಲೇ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದೇನೆ, ದೂರವಾಣಿಯಲ್ಲಿ ಮಾತನಾಡಿದ್ದೇನೆ ಪ್ರದಾನಿ ಅವರ ಭೋಜನ ಕೂಟಕ್ಕೆ ಹಾಜರಾಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com