ಜಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಗುಂಪುಗಳ ನಡುವೆ ಸಂಘರ್ಷಣೆ ನಡೆದು ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಸಹರಾನ್ ಪುರ್ ಗೆ ಇಂದು ಪರಿಸ್ಥಿತಿಯನ್ನು ಪರಾಮರ್ಶಿಸಲು ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬಹುಜನ ಸಮಾಜವಾದಿ ಪಕ್ಷ ನಾಯಕಿ ಮಾಯಾವತಿ ಸಹರಾನ್ ಪುರಕ್ಕೆ ಭೇಟಿ ನೀಡಿದ್ದ ವೇಳೆ ಇಲ್ಲಿ ಘರ್ಷಣೆ ಉಂಟಾಯಿತು. ಘಟನೆಯಲ್ಲಿ ಓರ್ವ ಮೃತಪಟ್ಟು ಅನೇಕರು ಗಾಯಗೊಂಡಿದ್ದರು.