ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತ ನಡೆಸುವುದರಲ್ಲಿ ಮುಫ್ತಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೇವಲ ದಕ್ಷಿಣ ಕಾಶ್ಮೀರದಲ್ಲಷ್ಟೇ ಅಲ್ಲದೆ, ಇಡೀ ಕಾಶ್ಮೀರದಲ್ಲಿ ಪರಿಸ್ಥಿತಿ ದುರಂತಕ್ಕೆ ತಿರುಗಿದೆ. ಈ ದುರಂತಗಳು ಇಡೀ ದೇಶದಲ್ಲಿ ಕೋಮು ಘರ್ಷಣೆಗೆ ಕಾರಣವಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಈ ಸಮಸ್ಯೆಗೆ ಅಂತ್ಯ ಹಾಡಬೇಕಿದೆ. ಕಾಶ್ಮೀರ ಈಗಲೇ ಕುದಿಯುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಬಾರದು. ಎಲ್ಲರದ್ದೂ ಒಂದೇ ದನಿಯಾಗಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಾಂತಿಯನ್ನು ಪಠಿಸುತ್ತಿದ್ದು, ಎಲ್ಲರೂ ಅವರ ಮಾತನ್ನು ಕೇಳಬೇಕಿದೆ ಎಂದು ತಿಳಿಸಿದ್ದಾರೆ.