ಪ್ರಕರಣ ಸಂಬಂಧ ಸ್ವತಃ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಖಂಡನೆ ವ್ಯಕ್ತಪಡಿಸಿದ್ದಾರೆ. ಇಂಥ ವಿವೇಚನೆ ಇಲ್ಲದ, ಸ್ವೀಕಾರಾರ್ಹವಲ್ಲದ, ಕ್ರೂರ ಕೃತ್ಯಗಳನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ಕೇರಳ ರಾಜ್ಯ ಸರ್ಕಾರವು ಕೇಂದ್ರ ನಿಯಗಳಿಗೆ ಸಡ್ಡು ಹೊಡೆಯಲು ತನ್ನದೇ ಆದ ಪ್ರತ್ಯೇಕ ಕಾಯ್ದೆ ತರುವ ಸುಳಿವುಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.