ಛತ್ತೀಸ್ಗಢ: ಅಭಿವೃದ್ಧಿ ಯೋಜನೆಗೆ ವಿರೋಧ, ಬಸ್'ಗೆ ಬೆಂಕಿ ಹಚ್ಚಿದ ನಕ್ಸಲರು

ಛತ್ತೀಸ್ಗಢದ ಝೊರಿಗಾಂವ್ ನಲ್ಲಿ ನಡೆಸಲಾಗುತ್ತಿದ್ದ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸಿರುವ ನಕ್ಸಲರು ಧನೋರಾ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ ವೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಝೊರಿಗಾಂವ್ (ಛತ್ತೀಸ್ಗಢ): ಛತ್ತೀಸ್ಗಢದ ಝೊರಿಗಾಂವ್ ನಲ್ಲಿ ನಡೆಸಲಾಗುತ್ತಿದ್ದ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸಿರುವ ನಕ್ಸಲರು ಧನೋರಾ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ ವೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ರಾತ್ರಿ ನಡೆಸಿದೆ. 
ಕಳೆದ ರಾತ್ರಿ ಒರ್ಚ್ಛಾ ಪ್ರದೇಶದ ಧನೊರಾದಲ್ಲಿ ಬಸ್ ವೊಂದು ಚಲಿಸುತ್ತಿತ್ತು. ಈ ವೇಳೆ ರಸ್ತೆಗೆ ಅಡ್ಡಗಟ್ಟಿರುವ ನಕ್ಸಲರು ಬಸ್ ನಲ್ಲಿದ್ದ ಪ್ರಯಾಣಿಕರನ್ನು ಬೆದರಿಸಿ ಹೊರಗೆ ಬಳುಸಿದ್ದಾರೆ. ನಂತರ ಬಸ್ ಗೆ ಬೆಂಕಿ ಸ್ಥಳದಿಂದ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. 
ಝೊರಿಗಾಂವ್ ಜಿಲ್ಲೆಯ ರಸ್ತೆ ನಿರ್ಮಾಣ ಕಾರ್ಯಗಳು ನಡೆಯುತ್ತಿತ್ತು. 66 ಕಿಮೀ ನಲ್ಲಿ ಈ ವರೆಗೂ 45 ಕಿಮೀನಷ್ಟು ರಸ್ತೆ ಕಾಮಗಾರಿ ನಡೆದಿದೆ. ಇದಕ್ಕೆ ನಕ್ಸಲರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com