ಹಿರಿಯ ಕಾಂಗ್ರೆಸ್ ನಾಯಕರಾದ ಪಿ.ಚಿದಂಬರಂ ಹಾಗೂ ಸುಶೀಲ್ ಕುಮಾರ್ ಶಿಂಧೆ ಅವರು ಸಂಸತ್ತಿನಲ್ಲೇ ದೇಶದಲ್ಲಿ ಹಿಂದೂ ಭಯೋತ್ಪಾದನೆ ಇದೆ ಎಂದು ಹೇಳಿದ್ದರು. ಈಗ ಅವರ ಸಾಲಿಗೆ ಕಮಲ್ ಹಾಸನ್ ಅವರು ಸೇರಿದ್ದಾರೆ. ಪಿ.ಚಿದಂಬರಂ, ಕಮಲ್ ಹಾಸನ್ ಹಾಗೂ ಹಫೀಜ್ ಸಯೀದ್ ಎಲ್ಲಾ ಒಂದೇ. ಈ ಎಲ್ಲಾ ಜನ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ನರಸಿಂಹರಾವ್ ಅವರು ವಾಗ್ದಾಳಿ ನಡೆಸಿದ್ದಾರೆ.