ಇನ್ನು ಬಾಯ್ಲರ್ ಸ್ಫೋಟದಲ್ಲಿ ಸಾವಿಗೀಡಾದ ಮತ್ತು ಗಾಯಗೊಂಡ ಸಂತ್ರಸ್ಥರಿಗೆ ಉತ್ತರ ಪ್ರದೇಶ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ದುರಂತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ. ಗಂಭೀರವಾಗಿ ಗಾಯಗೊಂಡಿರುವವರಿಗೆ 50 ಸಾವಿರ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 25 ಸಾವಿರ ಪರಿಹಾರವನ್ನು ಯೋಗಿ ಆದಿತ್ಯನಾಥ ಸರ್ಕಾರ ಘೋಷಿಸಿದೆ. ಪ್ರಸ್ತುತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು, ದೂರವಾಣಿ ಮೂಲಕ ದುರಂತದ ಬಗ್ಗೆ ಮಾಹಿತಿ ಪಡೆದಿದ್ದು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.