ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸಾರ್ವಜನಿಕ ಜೀವನದಲ್ಲಿರುವಾಗ ಹಲವು ಆರೋಪಗಳು ಎದುರಾಗುತ್ತವೆ, ಆದರೆ ಆರೋಪಗಳು ಸತ್ಯದಿಂದ ಕೂಡಿರಬೇಕು. ಕೆಲವು ಆರೋಪಗಳು ವ್ಯಕ್ತಿಗೆ ನೋವು ತರುತ್ತವೆ. ಆದರೆ ಅಂತಹ ಆರೋಪಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.