ಅತ್ಯಂತ ಕೋಪದಿಂದ ಈ ವ್ಯಂಗ್ಯಚಿತ್ರವನ್ನು ರಚಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಾಲಕೃಷ್ಣನ್ ಹೇಳಿದ್ದರು. " ನಾನು ಟೀಕೆಯ ವಿರುದ್ಧವಾಗಿಲ್ಲ. ಆದರೆ ವ್ಯಂಗ್ಯ ಚಿತ್ರಕಾರರು ಘಟನೆಯ ವಾಸ್ತವಾಂಶಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೇ ಮುಖ್ಯಮಂತ್ರಿ, ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿಯ ಬಗ್ಗೆ ಅವಮಾನಕರ ರೀತಿಯಲ್ಲಿ ವ್ಯಂಗ್ಯಚಿತ್ರ ರಚಿಸಿದ್ದಾರೆ, ಲಂಚ ಸ್ವೀಕರಿಸಿದ ಪ್ರಕರಣದ ಬಗ್ಗೆ ಮೌನ ವಹಿಸಿದ್ದೇವೆ ಎಂಬ ತಪ್ಪು ಸಂದೇಶವನ್ನು ಜನತೆಗೆ ರವಾನಿಸುತ್ತದೆ ಎಂದು ಜಿಲ್ಲಾಧಿಕಾರಿ ಸಂದೀಪ್ ನಂದೂರಿ ಹೇಳಿದ್ದಾರೆ.