ಖಿಚಡಿ ಕಾರ್ಯಕ್ರಮ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ದ್ವಿಜೇಂದ್ರ ತ್ರಿಪಾಠಿಯವರು, ಖಚಿಡಿ ಅಥವಾ ಬಾಬಾ ರಾಮ್ ದೇವ್ ಅವರ ಉತ್ಪನ್ನಗಳ ಕುರಿತಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಧಾನಿ ಮೋದಿ ನೇತೃತ್ವ ಸರ್ಕಾರಕ್ಕೆ ಬೇರಾವುದೇ ಕೆಲಸವಿಲ್ಲ. ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುವುದರಿಂದ ದೇಶ ಮುಂದಕ್ಕೆ ಸಾಗಲು. ಇಂತಹ ಕಾರ್ಯಕ್ರಮಗಳಿಗೆ ಆಸಕ್ತಿ ತೋರುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಯ ಹಾಗೂ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.