ಕೇರಳ: ಮಲೆಯಾಳಂ ಸುದ್ದಿ ವಾಹಿನಿಯ ವರದಿಗಾರ ಆತ್ಮಹತ್ಯೆಗೆ ಶರಣು

ಮಲೆಯಾಳಂ ಸುದ್ದಿ ವಾಹಿನಿಯ 26 ವರ್ಷದ ವರದಿಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೋಜಿಕೋಡ್: ಮಲೆಯಾಳಂ ಸುದ್ದಿ ವಾಹಿನಿಯ 26 ವರ್ಷದ ವರದಿಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಶರಣಾದ ವರದಿಗಾರ ಕೊಚ್ಚಿ ಜಿಲ್ಲೆಯ ತೊಂಪುಬಡಿಯ ನಿತೀನ್ ದಾಸ್ ಎಂದು ಗುರುತಿಸಲಾಗಿದ್ದು, ನಿನ್ನೆ ರಾತ್ರಿ ಅಪಾರ್ಟ್ ಮೆಂಟ್ ನ ತನ್ನ ಕೊಣೆಯಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನೆರೆಯವರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ನೆರೆಯವರಿಂದ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ದಾಸ್ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 174(ಅಸಹಜ ಸಾವು) ಅಡಿ ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com