ಇಂದು ವರ್ನಾಕ್ಯುಲರ್ ದೈನಿಕದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚೆನ್ನೈಗೆ ಆಗಮಿಸುತ್ತಿದ್ದು, ಡಿಎಂಕೆ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇದು ಎಐಎಡಿಎಂಕೆ ಸದಸ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದೇ ಸಂದರ್ಭದಲ್ಲಿ ನಾಳೆ ಸುಪ್ರೀಂ ಕೋರ್ಟ್ ನಲ್ಲಿ 2ಜಿ ಹಗರಣದ ವಿಚಾರಣೆ ಇದ್ದು, ಇದೂ ಕೂಡ ಪ್ರಧಾನಿ ಮೋದಿ-ಎಂ ಕರುಣಾನಿಧಿ ಭೇಟಿ ಕುರಿತು ಕುತೂಹಲ ಹೆಚ್ಚಿಸಿದೆ.