ಕುಟುಂಬವೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕೃಷ್ಣನ್ ಅವರು ಮುಖ್ಯಮಂತ್ರಿ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಬಗ್ಗೆ ಆಕ್ಷೇಪಾರ್ಹ ವ್ಯಂಗ್ಯ ಚಿತ್ರ ರಚಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವ್ಯಂಗ್ಯ ಚಿತ್ರ ವೈರಲ್ ಆಗಿ, ಈಗ ವ್ಯಂಗ್ಯ ಚಿತ್ರ ರಚಿಸಿದ್ದ ಬಾಲಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ನಿನ್ನೆ ಸಂಜೆಯೇ ಬಾಲಾ ಅವರನ್ನು ಬಂಧಿಸಲಾಗಿತ್ತು. ಇದೀಗ ತಿರುನಲ್ವೇಲಿ ಕೋರ್ಟ್ ಬಾಲಾ ಅವರಿಗೆ ಜಾಮೀನು ಮಂಜೂರು ಮಾಡಿದೆ.