ನಾರಾಯಣಪುರ(ಛತ್ತೀಸ್ಘಡ): ಛತ್ತೀಸ್ಘಡದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಆರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.
ಅಭಿಜುಮಾರ್ಗ್ ಪ್ರಹಾರ್ ನಲ್ಲಿ ಭದ್ರತಾ ಪಡೆ ಯೋಧರು ನಕ್ಸಲರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಆರು ಮಂದಿ ನಕ್ಸಲರು ಹತ್ಯೆಯಾಗಿದ್ದು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ರಾತ್ರಿ ಆಪರೇಷನ್ ಪ್ರಹಾರ್ 2ನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ನಕ್ಸಲರು ಅಡಗಿದ್ದ ಕ್ಯಾಂಪ್ ಮೇಲೆ ದಾಳಿ ನಡೆಸಿ ಆರು ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದ್ದು ಅವರಿಂದ ಒಂಬತ್ತು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಡಿಎಂ ಅವಾಸ್ತಿ ಹೇಳಿದ್ದಾರೆ.