ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಶ್ಲಾಘಿಸಿದ ಅವರು, ಭಯೋತ್ಪಾದಕರನ್ನು ನಿಗ್ರಹಿಸಲು ಮತ್ತು ಕಾಶ್ಮೀರ ಕಣಿವೆಯಲ್ಲಿ ಅವರ ಉದ್ದೇಶವನ್ನು ಹತ್ತಿಕ್ಕಲು ಕೇಂದ್ರ ಮೀಸಲು ಪೊಲೀಸ್ ಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಜಾಗೃತ ದಳ ಒಟ್ಟಾಗಿ ಕೆಲಸ ಮಾಡುತ್ತಿದೆ. ಪಾಕಿಸ್ತಾನ ಅಪವಿತ್ರ ಅಭ್ಯಾಸಗಳಲ್ಲಿ ತೊಡಗಿದೆ. ಆದರೆ ನಮ್ಮ ಭದ್ರತಾ ಪಡೆಗಳ ಮಧ್ಯೆ ಹೊಂದಾಣಿಕೆ ಎಷ್ಟು ಉತ್ತಮವಾಗಿದೆಯೆಂದರೆ ಉಗ್ರರನ್ನು ಯಾವಾಗಲೂ ಸದೆಬಡಿಯಲಾಗುತ್ತಿದೆ ಎಂದು ಹೇಳಿದರು.