ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದ ಟ್ರಕ್: 9 ವಿದ್ಯಾರ್ಥಿಗಳ ದಾರುಣ ಸಾವು

ದಟ್ಟವಾಗಿ ಮಂಜು ಕವಿದಿದ್ದರಿಂದ ರಸ್ತೆ ಕಾಣದೆ ಟ್ರಕ್ ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿಸಿದ್ದು ಪರಿಣಾಮ 9 ವಿದ್ಯಾರ್ಥಿಗಳು ದಾರುಣ...
ಅಪಘಾತ
ಅಪಘಾತ
ಚಂಢಿಗಡ್: ದಟ್ಟವಾಗಿ ಮಂಜು ಕವಿದಿದ್ದರಿಂದ ರಸ್ತೆ ಕಾಣದೆ ಟ್ರಕ್ ಚಾಲಕನೊಬ್ಬ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿಸಿದ್ದು ಪರಿಣಾಮ 9 ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಪಂಜಾಬ್ ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದೆ. 
ಬತಿಂಡಾ-ಬರ್ನಾಲಾ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದ ರಸ್ತೆ ಬದಿಯಲ್ಲಿ ವಿದ್ಯಾರ್ಥಿಗಳ ನಿಂತಿರುವುದನ್ನು ಗಮನಿಸುವಲ್ಲಿ ಟ್ರಕ್ ಚಾಲಕ ವಿಫಲರಾಗಿದ್ದು ಅಪಘಾತಕ್ಕೆ ಕಾರಣವಾಗಿದೆ. 
ಭೀಕರ ಅಪಘಾತದಲ್ಲಿ ಒಂಬತ್ತು ವಿದ್ಯಾರ್ಥಿ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನು ಏಳು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com