ಅ.15 ರಂದು ಚೆನ್ನೈ ನಿಂದ ದೆಹಲಿಗೆ ಬಂದಿಳಿದಿದ್ದ 6E 487 ವಿಮಾನದಲ್ಲಿ ಘತನೆ ನಡೆದಿದೆ. ಪ್ರಯಾಣಿಕ ರಾಜೀವ್ ಕಟಿಯಾಲ್ ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿದಂತೆ ಗ್ರೌಂಡ್ ಸ್ಟಾಫ್ ನೊಂದಿಗೆ ವಾಗ್ವಾದ ನಡೆಸಿದ್ದಾರೆ, ವಾಗ್ವಾದ ವಿಕೋಪಕ್ಕೆ ತಿರುಗಿ ಸಿಬ್ಬಂದಿಗಳು ಪ್ರಯಾಣಿಕನನ್ನು ಥಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ವಿಮಾನಯಾನ ಸಂಸ್ಥೆಯ ಅಧ್ಯಕ್ಷ ಆದಿತ್ಯ ಘೋಷ್ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಅಹಿತಕರ ಘಟನೆಗೆ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.