ಪ್ರದ್ಯುಮನ್ ಹತ್ಯೆ ಪ್ರಕರಣ: ಪರೀಕ್ಷೆ ಮುಂದೂಡಲು ಹತ್ಯೆ ಮಾಡಿದ್ದಾಗಿ ಪ್ರಥಮ ಪಿಯು ವಿದ್ಯಾರ್ಥಿ ತಪ್ಪೊಪ್ಪಿಗೆ- ಸಿಬಿಐ

ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ
ರ್ಯಾನ್ ಇಂಟರ್ ನ್ಯಾಷನಲ್ ಶಾಲೆ
ರ್ಯಾನ್ ಇಂಟರ್ ನ್ಯಾಷನಲ್ ಶಾಲೆ
Updated on
ನವದೆಹಲಿ: ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ  ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ ಬಂಧಿಸಿದ್ದು, ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಿದೆ. 
ಪರೀಕ್ಷೆ ಹಾಗೂ ಪೋಷಕರು-ಶಿಕ್ಷಕರ ಸಭೆಯನ್ನು ಮುಂದೂಡಲು ಸಹಕಾರಿಯಾಗುತ್ತದೆ ಎಂಬ ದುರಾಲೋಚನೆಯಿಂದ ಪ್ರದ್ಯುಮನ್ ಎಂಬ ವಿದ್ಯಾರ್ಥಿಯನ್ನು ಕೊಲೆ ಮಾಡಿರುವುದಾಗಿ ಪ್ರಥಮ ಪಿಯು ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ ಎಂದು ಸಿಬಿಐ ಮಾಹಿತಿ ನೀಡಿದೆ.
ಕೊಲೆ ಆರೋಪದಡಿ ಮಗನ ಬಂಧನವನ್ನು ತಂದೆ ಖಚಿತಪಡಿಸಿದ್ದಾರೆ, ಆದರೆ ಬಂಧಿತ ಆರೋಪಿ ಬಾಲಾಪರಾಧಿಯಾಗಿರುವುದರಿಂದ ಸಿಬಿಐ ಈ ವರೆಗೂ ಅಧಿಕೃತ ಹೇಳಿಕೆ ನೀಡಿಲ್ಲ.
ವಿದ್ಯಾರ್ಥಿಯ ಬಂಧನವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆತನ ತಂದೆ, ನನ್ನ ಮಗ ಅಪರಾಧ ಮಾಡಿಲ್ಲ, ಶೌಚಾಲಯದಲ್ಲಿ ವಿದ್ಯಾರ್ಥಿಯ ಮೃತದೇಹ ಇರುವುದನ್ನು ಶಿಕ್ಷಕರಿಗೆ ತಿಳಿಸಿದ್ದ ಎಂದು ಹೇಳಿದ್ದಾರೆ. ಸೆಪ್ಟೆಂಬರ್ 8ರಂದು 7 ವರ್ಷ ವಿದ್ಯಾರ್ಥಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು, ವಿದ್ಯಾರ್ಥಿಯ ಶವ ಶಾಲಾ ಶೌಚಾಲಯದಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com