ಐಟಿ ದಾಳಿ ರಾಜಕೀಯ ಪ್ರೇರಿತ, ಐಟಿ ದಾಳಿ ಮೂಲಕ ಕೇಂದ್ರ ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ: ಟಿಟಿವಿ ದಿನಕರನ್

ಶಶಿಕಲಾ ಅವರ ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೆ ನಡೆದ ಆದಾಯ ತೆರಿಗೆ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಐಟಿ ದಾಳಿ ಮೂಲಕ ಕೇಂದ್ರ ಸರ್ಕಾರ ನಮ್ಮನ್ನು ಬೆದರಿಸುವ ಪ್ರಯತ್ನ ಮಾಡುತ್ತಿದೆ ಎಂದು ಶಶಿಕಲಾ ಆಪ್ತ ಟಿಟಿವಿ ದಿನಕರನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಚೆನ್ನೈ: ಶಶಿಕಲಾ ಅವರ ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೆ ನಡೆದ ಆದಾಯ ತೆರಿಗೆ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಐಟಿ ದಾಳಿ ಮೂಲಕ ಕೇಂದ್ರ ಸರ್ಕಾರ ನಮ್ಮನ್ನು ಬೆದರಿಸುವ ಪ್ರಯತ್ನ ಮಾಡುತ್ತಿದೆ ಎಂದು  ಶಶಿಕಲಾ ಆಪ್ತ ಟಿಟಿವಿ ದಿನಕರನ್ ಹೇಳಿದ್ದಾರೆ.
ಚೆನ್ನೈನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ದಿನಕರನ್, ತಮಿಳುನಾಡು ಜನತೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಐಟಿ ದಾಳಿ ಮತ್ತು ಅದರ ಹಿನ್ನಲೆ ಏನು ಎಂಬುದನ್ನೂ ಕೂಡ ಅವರು ಅರಿತಿದ್ದು, ಎಲ್ಲದಕ್ಕೂ ಚುನಾವಣೆ  ವೇಳೆ ಉತ್ತರಿಸುತ್ತಾರೆ. ಐಟಿ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರದ ನೇರ ಕೈವಾಡವಿದೆ. ಐಟಿ ದಾಳಿ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇದಕ್ಕೆಲ್ಲಾ ತಾವು  ಹೆದರುವುದಿಲ್ಲ ಎಂದು ದಿನಕರನ್ ಹೇಳಿದ್ದಾರೆ.
ಐಟಿ ದಾಳಿ ಮೂಲಕ ನಮ್ಮನ್ನು ಮಣಿಸುವ ಉದ್ದೇಶ ಕೇಂದ್ರ ಸರ್ಕಾರದ್ದಾಗಿದ್ದರೆ ಅದು ಅವರ ಹಗಲು ಗನಸಷ್ಟೇ..ರಾಜ್ಯವನ್ನು ಲೂಟಿ ಮಾಡಿದವರು ಇಂದು ಅಧಿಕಾರದಲ್ಲಿದ್ದಾರೆ ಎಂದು ನೇರವಾಗಿ ಪನ್ನೀರ್ ಸೆಲ್ವಂ ಹಾಗೂ ಪಳನಿ  ಸಾಮಿ ಬಣವನ್ನು ಕುಟುಕಿದರು.
ಇನ್ನು ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ಜಯಾ ಟಿವಿ, ಜಾಝ್ ಸಿನಿಮಾ ಸೇರಿದಂತೆ ವಿಕೆ ಶಶಿಕಲಾ ಅವರಿಗೆ ಸಂಬಂಧಿಸಿದ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದು, ತಮಿಳುನಾಡಿನ 145 ಪ್ರದೇಶಗಳೂ ಸೇರಿದಂತೆ  ಒಟ್ಟು 160 ಪ್ರದೇಶಗಳಲ್ಲಿ ಏಕಕಾಲಾಕ್ಕೆ ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com