ದೇಶದ ಬಟ್ಟೆ ಮತ್ತು ವಜ್ರ ವ್ಯಾಪಾರ ಕೇಂದ್ರವಾದ ಸೂರತ್ ನಲ್ಲಿ ನಿನ್ನೆ ಕರಾಳ ದಿನವನ್ನು ಆಚರಿಸಿದ ಸಂದರ್ಭದಲ್ಲಿ ಕೈಗಾರಿಕಾ ಪ್ರತಿನಿಧಿಗಳು ಮತ್ತು ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇಶದ ಆರ್ಥಿಕತೆ ಮೇಲೆ ಸರ್ಕಾರ ವರ್ಷದ ಹಿಂದೆ ದಾಳಿ ನಡೆಸಿತು. ಸೂರತ್ ವ್ಯಾಪಾರಿಗಳನ್ನು ಜಿಎಸ್ ಟಿ ಮತ್ತು ನೋಟುಗಳ ಅಮಾನ್ಯೀಕರಣ ದಿಕ್ಕೆಡಿಸಿದೆ.ಕೈಗಾರಿಕೆಗಳು ಆರ್ಥಿಕತೆ ಮೇಲೆ ಎರಡು ಮುಖ್ಯ ನಿರ್ಧಾರಗಳಿಂದ ನಲುಗಿ ಹೋಗಿದೆ. ಜನರ ಬದುಕಿಗೆ ಕಷ್ಟವಾಗಿದೆ ಎಂದು ಜನರೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅರಿವಿಗೆ ಬಂದಿದೆ ಎಂದು ಹೇಳಿದರು.