ಬಸ್ ಕಂಡಕ್ಟರ್ ಅಶೋಕ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣದಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇರಲಿಲ್ಲ ಎಂದು ಸಿಬಿಐ ಇತ್ತೀಚೆಗಷ್ಟೇ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ನಿರ್ದೋಷಿ ಎಂಬುದು ಬಹುತೇಕ ಸಾಬೀತಾಗಿದ್ದು, ಗುರುಗ್ರಾಮ ವಿಶೇಷ ತನಿಖಾ ದಳದ ವಿರುದ್ಧ ಮೊಕದ್ದಮೆ ದಾಖಲಿಸಲು ತೀರ್ಮಾನಿಸಿದ್ದೇವೆ ಎಂದು ಕಂಡಕ್ಟರ್ ಕುಟುಂಬ ಸದಸ್ಯರು ತಿಳಿಸಿದ್ದಾರೆ.