ವಿಮಾನ ಪೈಲಟ್ನ ಕೆಲಸದ ಸಮಯ ಮುಗಿದಿದೆ. ಅದಕ್ಕಾಗಿ ಅವರು ವಿಮಾನವನ್ನು ರನ್ ವೇ ನಲ್ಲಿಯೇ ಬಿಟ್ಟು ಹೊರಟಿದ್ದಾರೆ. "ಪೈಲಟ್ನ ಕೆಲಸದ ಸಮಯ ಮುಗಿದಿತ್ತು. ಹೀಗಾಗಿ ಅವರು ವಿಮಾನ ಹಾರಿಸಲು ಸಾಧ್ಯವಿರಲಿಲ್ಲ. ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿಯಮಗಳ ಪ್ರಕಾರ ಸುರಕ್ಷತೆಯ ಕಾರಣದಿಂದ ಪೈಲಟ್ ಕೆಲಸದ ಸಮಯವನ್ನು ವಿಸ್ತರಿಸಲು ಸಾಧ್ಯವಿರಲಿಲ್ಲ "ಎಂದು ಜೈಪುರದ ಸಂಗನೇರ್ ವಿಮಾನ ನಿಲ್ದಾಣದ ನಿರ್ದೇಶಕರಾದ ಜೆಎಸ್ ಬಲ್ಹಾರಾ ಹೇಳಿದ್ದಾರೆ.