ಜಿಎಸ್'ಟಿ ಕುರಿತ ಚಿದಂಬರಂ ಹೇಳಿಕೆ ವಿರುದ್ಧ ಕಿಡಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ಹೇಳಿಕೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಿಡಿಕಾರಿದ್ದಾರೆ.
ಎಲ್ಲಾ ರಾಜಕೀಯ ಪಕ್ಷಗಳ ಅಭಿಪ್ರಾಯಗಳು ಹಾಗೂ ಅನುಮತಿ ಪಡೆದುಕೊಂಡ ಬಳಿಕವಷ್ಟೇ ಅಗತ್ಯ ಬದಲಾವಣೆಗಳನ್ನು ಮಾಡುವ ಮೂಲಕ ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತಂದಿತ್ತು ಎಂದು ಹೇಳಿದ್ದಾರೆ.
ಸಾರ್ವಜನಿಕರು ಏನು ಹೇಳುತ್ತಾರೋ ಎಲ್ಲವನ್ನೂ ಮೋದಿ ಸರ್ಕಾರ ಕೇಳುತ್ತಿದೆ. ಅವುಗಳಿಗೆ ಪ್ರತಿಕ್ರಿಯೆಯನ್ನೂ ನೀಡುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳ ಅನುಮತಿ ಪಡೆದುಕೊಂಡ ಬಳಿಕವೇ ಜಿಎಸ್'ಟಿಯನ್ನು ಜಾರಿಗೆ ತರಲಾಗಿತ್ತು. ಜಿಎಸ್ ಟಿ ಮಂಡಳಿ ಸಭೆಯಲ್ಲಿ ನಿನ್ನೆ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರದಂತೆಯೇ ಜಿಎಸ್ ಟಿ ಕುರಿತಂತೆ ಯಾವುದೇ ಬದಲಾವಣೆ ತರಬೇಕಿದ್ದರೂ ಆ ಬದಲಾವಣೆಯನ್ನು ಮಾಡಲು ನಾವು ಸಿದ್ಧರಿದ್ದೇವೆಂದು ತಿಳಿಸಿದ್ದಾರೆ.