ವಿಜಯವಾಡ: ಬೋಟ್ ಮುಳುಗಿ 13 ಪ್ರಯಾಣಿಕರ ಸಾವು

ಆಂಧ್ರ ಪ್ರದೇಶದ ಕೃಷ್ಣ ನದಿಯಲ್ಲಿ ಬೋಟ್ ಮುಳುಗಿ 13 ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೋಟ್ ದುರಂತ
ಬೋಟ್ ದುರಂತ
Updated on
ವಿಜಯವಾಡ: ಆಂಧ್ರ ಪ್ರದೇಶದ ಕೃಷ್ಣ ನದಿಯಲ್ಲಿ ಬೋಟ್ ಮುಳುಗಿ 13 ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕೃಷ್ಣಾ ಜಿಲ್ಲೆ ಇಬ್ರಾಹಿಂ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. 35 ಪ್ರವಾಸಿಗರಿದ್ದ ಬೋಟ್ ಭವಾನಿ ಐಲ್ಯಾಂಡ್ ನಿಂದ ಪವಿತ್ರ ಸಂಗಮಕ್ಕೆ ಹೋಗುತ್ತಿದ್ದಾಗ ಮುಳುಗಿದ್ದು 13 ಪ್ರವಾಸಿಗರು ಜಲಸಮಾಧಿಯಾಗಿದ್ದು ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಸಾಂಭ ಶಿವ ರಾವ್ ಅವರು ಸ್ಪಷ್ಟಪಡಿಸಿದ್ದಾರೆ.
ಬೋಟ್ ದುರಂತದ ಹಿನ್ನೆಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು 20 ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇನ್ನು ಹಲವು ಪ್ರಯಾಣಿಕರು ನಾಪತ್ತೆಯಾಗಿರುವ ಹಿನ್ನಲೆ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com