ಈ ಬಗ್ಗೆ ಸ್ವತಃ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವರು ಹೇಳಿದ್ದು, ಇನ್ನು ನಾಲ್ಕು ವರ್ಷಗಳಲ್ಲಿ ದೇಶದಲ್ಲಿನ ಎಲ್ಲ ಎಟಿಎಂ ಕೇಂದ್ರಗಳು ಹಾಗೂ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಗಳು ನೇಪತ್ಯಕ್ಕೆ ಸರಿಯಲಿವೆ ಎಂದು ಹೇಳಿದ್ದಾರೆ. ನೋಯ್ಡಾದ ಅಮಿಟಿ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ಅಮಿತಾಭ್ ಕಾಂತ್, "ನೋಟು ನಿಷೇಧ ಬಳಿಕ ಭಾರತದಲ್ಲಿ ಡಿಜಿಟಲ್ ವಹಿವಾಟಿಗೆ ಪ್ರಾಮುಖ್ಯತೆ ಸಿಗುತ್ತಿದೆ. ಜನರು ಕ್ಯಾಶ್'ಲೆಸ್ ವಹಿವಾಟಿಗೆ ಹೊಂದಿಕೊಳ್ಳ ತೊಡಗಿದ್ದಾರೆ. ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್'ಗಳ ಬಳಕೆ ಹೆಚ್ಚಾಗುತ್ತಿದೆ. ಆದರೆ, ಈ ನಡುವೆ ಮೊಬೈಲ್ ಫೋನ್'ಗಳೇ ಈಗ ಹಣ ವಹಿವಾಟಿನ ಕೇಂದ್ರವಾಗುತ್ತಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಎಟಿಎಂ ಕೇಂದ್ರ, ಡೆಬಿಟ್ ಮತ್ತು ಕ್ರೆಡಿಟ ಕಾರ್ಡ್ ಗಳೂ ಕೂಡ ನೇಪಥ್ಯಕ್ಕೆ ಸರಿಯಲಿದ್ದು, ಜನರು ಮೊಬೈಲ್ ಫೋನ್ ಮೂಲಕವೇ ಎಲ್ಲಾ ವಹಿವಾಟು ನಡೆಸಲಿದ್ದಾರೆ ಎಂದು ಹೇಳಿದ್ದಾರೆ.