ಇದೀಗ ಮುಖ್ಯ ನ್ಯಾಯಮೂರ್ತಿಗಳು ರಚಿಸಿರುವ ಮೂವರು ನ್ಯಾಯಾಧೀಶರುಗಳನ್ನೊಳಗೊಂಡ ಪೀಠ ನಾಳೆ ವಿಚಾರಣೆ ನಡೆಸಲಿದೆ. ಮೂವರು ನ್ಯಾಯಾಧೀಶರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಚೆಲಮೇಶ್ವರ ಆಗಲಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾಧೀಶರುಗಳಾಗಲಿ ಇಲ್ಲ. ಇದು ನ್ಯಾಯಾಲಯದ ಉನ್ನತ ನ್ಯಾಯಾಧೀಶರ ಮಧ್ಯೆ ಇರುವ ಭಿನ್ನಾಭಿಪ್ರಾಯ, ಮನಸ್ತಾಪಗಳನ್ನು ಸೂಚಿಸುತ್ತದೆ.