ಮೋದಿಯವರು ನಮ್ಮ ಬಗ್ಗೆ ಏನು ಹೇಳುತ್ತಾರೋ ಅದು ಮುಖ್ಯಮವಲ್ಲ. ನಾನು ಸತ್ಯವನ್ನಷ್ಟೇ ಹೇಳುತ್ತೇವೆ. ಗುಜರಾತ್ ರಾಜ್ಯದಲ್ಲಿ ವಿಕಾಸಕ್ಕೆ ಹುಚ್ಚು ಹಿಡಿದಿದೆ. ಬಿಜೆಪಿ ಹಾಗೂ ಕೇಂದ್ರ ಸರ್ಕಾರ ತಮ್ಮ ತಪ್ಪುಗಳನ್ನು ಎಂದಿಗೂ ಆತ್ಮಾವಲೋಕನ ಮಾಡಿಕೊಂಡಿಲ್ಲ. ಕಾಂಗ್ರೆಸ್ ಪಕ್ಷದ ಪ್ರಮುಖ ಸಿದ್ಧಾಂತವೇ ಸ್ವಯಂ ಆತ್ಮಾವಲೋಕನ ಮಾಡಿಕೊಳ್ಳುವುದು. ನಾವು ಯಾವುದೇ ತಪ್ಪು ಮಾಡಿದ್ದರೂ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ. ಆದರೆ, ಮೋದಿಯವರು ಎಂದಿಗೂ ಸರಕು ಮತ್ತು ಸೇವಾ ತೆರಿಗೆ, ನೋಟು ನಿಷೇಧ ಕುರಿತು ತಮ್ಮ ತಪ್ಪನ್ನು ಎಂದಿಗೂ ಒಪ್ಪಿಕೊಂಡಿಲ್ಲ.