ವಿಕಾಸಕ್ಕಲ್ಲ, ಕಾಂಗ್ರೆಸ್'ಗೆ ಹುಚ್ಚು ಹಿಡಿದಿದೆ: ರಾಹುಲ್ ವಿರುದ್ಧ ಜವಡೇಕರ್ ಕಿಡಿ

ಗುಜರಾತ್'ನಲ್ಲಿ ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ...
ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
Updated on
ಅಹಮದಾಬಾದ್: ಗುಜರಾತ್'ನಲ್ಲಿ ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಹುಚ್ಚು ಹಿಡಿದಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಭಾನುವಾರ ಹೇಳಿದ್ದಾರೆ. 
ಈ ಹಿಂದಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿಯವರು ಕಿಡಿಕಾರಿದ್ದರು. ಗುಜರಾತ್ ನಲ್ಲಿ ವಿಕಾಸಕ್ಕೆ ಏನಾಗಿದೆ? ವಿಕಾಸಕ್ಕೆ ಹುಚ್ಚು ಹಿಡಿದಿದೆ...? ಸುಳ್ಳುಗಳನ್ನು ಕೇಳಿ ಕೇಳಿ ವಿಕಾಸಕ್ಕೆ ಹುಚ್ಚು ಹಿಡಿದಿದೆ ಎಂದು ಟೀಕಿಸಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು, ವಿಕಾಸಕ್ಕೆ ಅಲ್ಲ, ಕಾಂಗ್ರೆಸ್ ಗೆ ಹುಚ್ಚು ಹಿಡಿದಿದೆ. ಕಾಂಗ್ರೆಸ್ ದಾರಿ ತಪ್ಪಿದೆ. ವಿಕಾಸ ಎಲ್ಲಿರಬೇಕು ಅಲ್ಲಿಯೇ ಇದೆ ಎಂದು ಟಾಂಗ್ ನೀಡಿದ್ದಾರೆ. 
ಗುಡರಾತ್ ರಾಜ್ಯದಲ್ಲಿ ಡಿಸೆಂಬರ್ 9 ಹಾಗೂ 14 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ಡಿಸೆಂಬರ್ 18 ರಂದು ಮತ ಎಣಿಕೆ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com