ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಕಿಡಿಕಾರುವ ಶಿವಸೇನೆ, ಈ ಹಿಂದೆ ವ್ಯಾಪಕ ಪ್ರತಿಭಟನೆಗಳ ಹೊರತಾಗಿಯೂ ಯಾವುದೇ ಕಾರಣಕ್ಕೂ ಜಿಎಸ್ ಟಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಸಿದ್ದ ಕೇಂದ್ರ ಸರ್ಕಾರ ಇದೀಗ ದಿಢೀರನೇ ಏಕೆ ತೆರಿಗೆ ಕಡಿತಗೊಳಿಸಿದೆ. ಗುಜರಾತ್ ನಲ್ಲಿ ಬಿಜೆಪಿ ಶಾಸಕರು ಗ್ರಾಮಗಳನ್ನು ಇತರೆ ಪಕ್ಷದವರು ಪ್ರವೇಶಿಸಲು ಬಿಡುತ್ತಿಲ್ಲ. ಗುಡರಾತ್ ಚುನಾವಣೆಯಲ್ಲಿ ವ್ಯಾಪಕ ಪ್ರಮಾಣದ ಕಪ್ಪು ಹಣ ಹರಿಯುವ ಶಂಕೆ ವ್ಯಕ್ತವಾಗುತ್ತಿದೆ. ಅವೈಜ್ಞಾನಿಕ ಜಿಎಸ್ ಟಿ ಜಾರಿಯಿಂದಾಗಿ ಕೇಂದ್ರ ಸರ್ಕಾರ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಬೆನ್ನೆಲುಬನ್ನೇ ಮುರಿದಿದ್ದು, ಹಣದುಬ್ಬರ ಪ್ರಮಾಣವನ್ನು ಏರಿಕೆ ಮಾಡಿದೆ.