ನ್ಯೂಸ್ 18 ವರದಿ ಮಾಡಿರುವಂತೆ ಕಳೆದ ನವೆಂಬರ್ 10ರಂದು ಈ ಘಟವೆ ನಡೆದಿದ್ದು, ಉಮ್ಮರ್ ಮೊಹಮದ್ ಎಂಬಾತನನ್ನು ಗುಂಡಿಟ್ಟುಕೊಂದು ಬಳಿಕ ಶವವನ್ನು ರೈಲ್ವೇ ಹಳಿ ಮೇಲೆ ಬಿಸಾಡಲಾಗಿದೆ. ವರದಿಯಲ್ಲಿರುವಂತೆ ಉಮ್ಮರ್ ಮೊಹಮದ್ ಮತ್ತು ಆತನ ಇಬ್ಬರು ಸಹಚರರು ಗೋವಿಂದ್ ಘಡ್ ನ ಆಳ್ವಾರ್ ಬಳಿಯ ಫಹಾರಿ ಗ್ರಾಮಕ್ಕೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದರು ಎಂದು ಆರೋಪಿಸಿ ಕೆಲ ದುಷ್ಕರ್ಮಿಗಳ ಗುಂಪು ಉಮ್ಮರ್ ಮೊಹಮದ್ ಮತ್ತು ಆತನ ಸ್ನೇಹಿತರ ಮೇಲೆ ದಾಳಿ ಮಾಡಿದೆ. ಈ ವೇಳೆ ಉಮ್ಮರ್ ಜೊತೆಗಿದ್ದು ಇಬ್ಬರು ಸಹಚರರು ಗಾಯಗೊಂಡಿದ್ದು, ಉಮ್ಮರ್ ಗೆ ದುಷ್ಕರ್ಮಿಗಳು ಗುಂಡಿಟ್ಟು ಕೊಂದು ಹಾಕಿದ್ದಾರೆ ಬಳಿಕ ಶವವನ್ನು ಆಳ್ವಾರ್ ಸಮೀಪದ ರೈಲ್ವೇ ಹಳಿಗಳ ಮೇಲೆ ಎಸೆದು ಹೋಗಿದ್ದಾರೆ.