ಆದರೆ, ಜೈಸ್ವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಆರ್.ಕೆ.ಅಗ್ರವಾಲ್, ಅರುಣ್ ಮಿಶ್ರಾ ಮತ್ತು ಎ.ಎಂ.ಖಾನ್ವಿಲ್ಕರ್ ಅವರನ್ನೊಳಗೊಂಡ ನ್ಯಾಯಪೀಠ, ಪ್ರಕರಣದಲ್ಲಿ ನ್ಯಾಯಾಧೀಶರೊಬ್ಬರನ್ನು ಲಂಚ ನೀಡಿ ತಮ್ಮತ್ತ ಸೆಳೆದುಕೊಳ್ಳಲು ಮಾಡಿದ ಪ್ರಯತ್ನಗಳು ಫೋರಮ್ ಶಾಪಿಂಗ್ ಎನಿಸುವುದಿಲ್ಲ ಎಂದು ಹೇಳಿ ಜೈಸ್ವಾಲ್ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದ್ದಾರೆ.