ಕೇರಳ ಹೈರ್ಕೋಟ್ ಸಹ ಥಾಮಸ್ ಚಾಂಡಿ ವಿರುದ್ಧ ನಿನ್ನೆ ಕಿಡಿಕಾರಿತ್ತು. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಪಿಣರಾಯಿ ಅವರ ಜತೆ 40 ನಿಮಿಷಗಳ ಕಾಲ ಚರ್ಚೆ ನಡೆಸಿದ ಬಳಿಕ ಸಾರಿಗೆ ಸಚಿವ ಸ್ಥಾನಕ್ಕೆ ಥಾಮಸ್ ಚಾಂಡಿ ರಾಜಿನಾಮೆ ನೀಡಿದ್ದಾರೆ. ಇದರೊಂದಿಗೆ ಕಳೆದ ಒಂದು ವರ್ಷದಲ್ಲಿ ಪಿಣರಾಯಿ ವಿಜಯನ್ ಸರ್ಕಾರದ ಮೂವರು ಸಚಿವರು ರಾಜಿನಾಮೆ ನೀಡಿದ್ದಂತಾಗಿದೆ.