ಮಾತುಕತೆ ಮೂಲಕ ಅಯೋಧ್ಯೆ ವಿವಾದ ಬಗೆಹರಿಸಲು ರವಿ ಶಂಕರ್ ಅವರು ಮುಂದಾಗಿದ್ದು, ಅವರಿಗೆ ಯಶಸ್ವಿ ದೊರೆಯಲಿ ಎಂದು ಆಶಿಸುತ್ತೇನೆ. ಆದರೆ, ವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ಆದೇಶವೇ ಅಂತಿಮವಾಗಿರುತ್ತದೆ. ನ್ಯಾಯಾಲಯದ ಆದೇಶವನ್ನು ಪ್ರತೀಯೊಬ್ಬರೂ ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಇದೇ ವೇಳೆ ವಿವಾದ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಮುಸ್ಲಿಂ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಕುರಿತಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ರಾಜಕೀಯ ಪ್ರೇರಿತ ಹೇಳಿಕೆಯನ್ನು ನನ್ನಿಂದ ಬಯಸಬಾರದು, ನನ್ನ ಸ್ಥಾನಕ್ಕೆ ಗೌರವವಿದ್ದು, ಒಂದು ರಾಜ್ಯದ ರಾಜ್ಯಪಾಲ ಸ್ಥಾನದಲ್ಲಿದ್ದು ರಾಜಕೀಯ ಪ್ರೇರಿತ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದಿದ್ದಾರೆ.