ಈ ಬಗ್ಗೆ ಸ್ವತಃ ಸಿಎಂ ಯೋಗಿ ಆದಿತ್ಯಾನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಕಸಕ್ಕೆ ಬೆಂಕಿ ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ವಿವಿಧ ಮುನ್ಸಿಪಲ್ ಕಾರ್ಪೋರೇಷನ್ ಗಳಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ಗದ್ದೆಗಳಿಗೆ ಬೆಂಕಿ ಹಾಕದಂತೆ ಮುಖ್ಯವಾಗಿ ಬೆಳೆಗಳ ಬಣವೆಗಳಿಗೆ ಬೆಂಕಿ ಹಾಕಿ ನಾಶಪಡಿಸದಂತೆ ರೈತರಲ್ಲಿ ಮನವಿ ಮಾಡಲು ಜಾಗೃತಿ ಅಭಿಯಾನ ನಡೆಸುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ. ಇದರ ಹೊರತಾಗಿ ರಸ್ತೆಗಳ ಮೇಲೆ ನೀರು ಚುಮುಕಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅದರಿಂದ ಧೂಳಿನ ಕಣಗಳು ಮೇಲೇಳದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.