ಎನ್ ಸಿಪಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಮಾತನಾಡುತ್ತಾ, "ಈ ವಿಧಾನಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ಜನರ ಭಾವನೆಗಳನ್ನು ಮತ್ತು ಗ್ರಹಿಕೆಯನ್ನು ತೋರಿಸುತ್ತದೆ" ಎಂದರು. "ಎನ್ ಸಿಪಿ ತನ್ನ ಸಂಪೂರ್ಣ ಬೆಂಬಲವನ್ನು ಕಾಂಗ್ರೆಸ್ ಗೆ ನೀಡುತ್ತದೆ ಮತ್ತು ಕಾಂಗ್ರೆಸ್ ನೊಂದಿಗೆ ಮೈತ್ರಿಕೂಟ ರಚಿಸಿಕೊಂಡು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ'' ಎಂದು ಅವರು ತಮ್ಮ ಲೋಕಸಭಾ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.