ಶ್ರೀನಗರದ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ಸಯೀದ್ ರಶೀದ್ ಷಾ ತಿಳಿಸಿದ್ದಾರೆ. ಕಾಶ್ಮೀರ ವಿಶ್ವವಿದ್ಯಾನಿಲಯ, ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಶ್ರೀನಗರ-ಗಂಡರ್ಬಲ್ ರಸ್ತೆಯಲ್ಲಿ ತೆರಳುತ್ತಿದ್ದ ಪೊಲೀಸರ ಮೇಲೆ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಓರ್ವ ಉಗ್ರನನ್ನು ಪೊಲೀಸರು ಹೊಡೆದುರುಳಿಸಿದ್ದರು.