ಸಂಪೂರ್ಣ ವೈಫಲ್ಯವನ್ನು ಕಂಡಿರುವ ಪ್ರಧಾನಿ ಮೋದಿ ಸರ್ಕಾರದ ಮೇಲೆ ಜನರು ತೀವ್ರವಾಗಿ ಕೆಂಡಾಮಂಡಲಗೊಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ನೀಡಲಾಗಿರುವ ಭರವಸೆಗಳ ಪೈಕಿ ಒಂದನ್ನೂ ಮೋದಿ ಸರ್ಕಾರ ಪೂರ್ಣಗೊಳಿಸಿಲ್ಲ. ನೋಟು ನಿಷೇಧ, ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ)ಯಿಂದಾಗಿ ಜನರ ಮನಸ್ಸಿಗೆ ಸಾಕಷ್ಟು ನೋವಾಗಿದೆ. 2018ರ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಸ್ಪರ್ಧಿಸಬಹುದು. ನಮ್ಮ ಪಕ್ಷದ ಕಾರ್ಯಕರ್ತರು ಸಂಸದೀಯ ಚುನಾವಣೆಗೆ ಸಿದ್ಧರಿರಬೇಕು.