ಈ ಹಿನ್ನಲೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪಟೇಲ್ ಸಮುದಾಯದ ಮುಖಂಡ ಹಾಗೂ ಪಾಸ್ (ಪಾಟಿದಾರ್ ಅನಾಮತ್ ಆಂದೋಲನ್ ಸಮಿತಿ) ಸದಸ್ಯ ದಿನೇಶ್ ಪಟೇಲ್, ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬೆಂಬಲವನ್ನು ನಾವು ವಾಪಸ್ ಪಡೆಯುವ ಕುರಿತು ಯೋಚಿಸುತ್ತಿದ್ದೇವೆ. ನಿನ್ನೆ ಪಟೇಲ್ ಸಮುದಾಯದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದು, ಅಕ್ಷಮ್ಯ. ಹೀಗಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಪಾಸ್ ಸಂಘಟನೆ ಪ್ರತಿಭಟನೆ ನಡೆಸಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತೆಗೆದುಕೊಂಡಿರುವ ಸಮುದಾಯದ ನಾಯಕರು ನಾಮಪತ್ರ ಸಲ್ಲಿಸದಂತೆ ಹೇಳಲಾಗಿದೆ. ಒಂದು ವೇಳೆ ಸಮುದಾಯದ ಮಾತು ಮೀರಿ ಯಾರಾದರೂ ನಾಮಪತ್ರ ಸಲ್ಲಿಕೆ ಮಾಡಿದರೆ ಅವರ ವಿರುದ್ಧವೂ ಪ್ರತಿಭಟನೆ ನಡೆಸುತ್ತೇವೆ. ಸಣ್ಣ ಸಮಸ್ಯೆಯನ್ನು ಬಗೆಹರಿಸದ ಪಕ್ಷದಿಂದ ರಾಜ್ಯದ ಜನತೆ ಮತ್ತು ಅವರ ಸಮಸ್ಯೆಗಳನ್ನು ಹೇಗೆ ನಿಯಂತ್ರಿಸಲು ಸಾಧ್ಯ ಎಂದು ದಿನೇಶ್ ಪಟೇಲ್ ಪ್ರಶ್ನಿಸಿದರು.