ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಎಚ್ಚರಿಕೆ ನೀಡಿದ ಉ.ಪ್ರ ಸಿಎಂ ಯೋಗಿ

ಕ್ರಿಮಿನಲ್ ಅಪರಾಧಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭ್ರಷ್ಟ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದು, ಭ್ರಷ್ಟ ಅಧಿಕಾರಿಗಳು ಕಡ್ಡಾಯ ನಿವೃತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಕ್ರಿಮಿನಲ್ ಅಪರಾಧಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭ್ರಷ್ಟ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದ್ದು, ಭ್ರಷ್ಟ ಅಧಿಕಾರಿಗಳು ಕಡ್ಡಾಯ ನಿವೃತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. 
ಭ್ರಷ್ಟ ಅಧಿಕಾರಿಗಳ ಬಳಿ ಇರುವ ಬಡವರ ಆಸ್ತಿಯನ್ನು ಮುಟ್ಟುಗೋಲು ಹಾಕಿ, ಸರ್ಕಾರ ಕಡ್ಡಾಯ ನಿವೃತ್ತಿಯನ್ನೂ ನೀಡಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ವಿವಿಧ ಯೋಜನೆಗಳ ಆಡಿಯಲ್ಲಿ ಬಡವರಿಗೆ ಸೇರಬೇಕಾದ್ದು ಸೇರದೇ ಇದ್ದರೆ ಅದನ್ನು ಸಹಿಸಿಕೊಳ್ಳುವುದಿಲ್ಲ. ಬಡವರಿಗೆ ಮೋಸ ಮಾಡುವ ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com