ಅಂತೆಯೇ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಅಣ್ಣಾ ಹಜಾರೆ, ಚುನಾವಣೆಗೂ ಮೊದಲು ನರೇಂದ್ರ ಮೋದಿ ಅವರು ರೈತರಿಗೆ ನೀಡಿದ್ದ ಆಶ್ವಾಸನೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದು, ಅವರು ಮಾತು ಉಳಿಸಿಕೊಂಡಿಲ್ಲ. ಪ್ರಧಾನಿ ಮೋದಿ ಅವರ ಕುರಿತು ನಾನು ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದೆ..ಆದರೆ ಅದು ಸುಳ್ಳಾಗಿದೆ. ಚುನಾವಣೆಗೂ ಮೊದಲು ದೇಶದ ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರು. ಕಪ್ಪುಹಣ ಹೂಡುವುದಾಗಿ ಹೇಳಿದ್ದ ಮೋದಿ ಕಪ್ಪುಹಣವನ್ನು ವಾಪಸ್ ತರುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾಗಳು ರೈತ ವಿರೋಧಿಯಾಗಿ ಮತ್ತು ಕೈಗಾರಿಕಾ ಪರವಾಗಿ ಕೆಲಸ ಮಾಡುತ್ತಿದ್ದು, ರೈತರ ಸಮಸ್ಯೆಗಳಿಗೆ ಕಿವುಡ ಮತ್ತು ಮೂಕವಾಗಿವೆ.