ಲೂಧಿಯಾನ: ಮಗುವಿನ ಮೇಲೆ ಹರಿದ ಕಾರು: ಚಾಲಕನನ್ನು ಹತ್ಯೆಗೈದ ಉದ್ರಿಕ್ತ ಜನ

ಮಗುವಿನ ಮೇಲೆ ಕಾರು ಹರಿಸಿದ ವ್ಯಕ್ತಿಯೊಬ್ಬನನ್ನು ಉದ್ರಿಕ್ತ ಜನರು ಹೊಡೆದು ಸಾಯಿಸಿರುವ ಘಟನೆ ಲುಧಿಯಾನಾದಲ್ಲಿ ಶುಕ್ರವಾರ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಲುಧಿಯಾನ: ಮಗುವಿನ ಮೇಲೆ ಕಾರು ಹರಿಸಿದ ವ್ಯಕ್ತಿಯೊಬ್ಬನನ್ನು ಉದ್ರಿಕ್ತ ಜನರು ಹೊಡೆದು ಸಾಯಿಸಿರುವ ಘಟನೆ ಲುಧಿಯಾನಾದಲ್ಲಿ ಶುಕ್ರವಾರ ನಡೆದಿದೆ. 
ಸಂಜಿತ್ (45) ಮೃತ ವ್ಯಕ್ತಿಯಾಗಿದ್ದಾನೆ. ಪುತ್ರಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ನೀಡುವ ಸಲುವಾಗಿ ಸಂಜಿತ್ ಅವರು ಹೋಗುತ್ತಿದ್ದರು. ಈ ವೇಳೆ ಕಾರು ರಸ್ತೆಯಲ್ಲಿದ್ದ ಮಗುವಿನ ಮೇಲೆ ಹರಿದಿದೆ. 
ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡ ಸ್ಥಳೀಯರು ಕಾರನ್ನು ಸುತ್ತುವರೆದು ಸಂಜಿತ್'ರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಸಂಜಿತ್ ಪ್ರಜ್ಞೆಯನ್ನು ಕಳೆದುಕೊಂಡಿದ್ದಾರೆ. 
ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ವೈದ್ಯರು ವ್ಯಕ್ತಿ ಸಾವನ್ನಪ್ಪಿದ್ದಾರೆಂದಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com