ನವದೆಹಲಿ: ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಸಂತಾಸ ಸೂಚಿಸಿರುವ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ತನಿಖೆಗೆ ಆದೇಶ ನೀಡಿದ್ದಾರೆ.
ಅಪಘಾತ ನಡೆದ ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯ ಆರಂಭವಾಗಿದ್ದು ತನಿಖೆಗೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.
ರೈಲ್ವೆ ಇಲಾಖೆ ವಕ್ತಾರ ಅನಿಲ್ ಸಕ್ಸೇನಾ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಇಲಾಖೆಯಿಂದ ಮಡಿದವರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಘೋಷಿಸಿರುವುದಾಗಿ ತಿಳಿಸಿದ್ದಾರೆ.