ಮುಂಬೈ ದಾಳಿಯಂತಹ ಉಗ್ರ ದಾಳಿಗಳನ್ನು ತಡೆಗಟ್ಟಲು ಇಸ್ರೋದ ಉಪಗ್ರಹ ಚಿತ್ರಗಳ ಕಣ್ಗಾವಲು ಸಹಕಾರಿಯಾಗಲಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ ಉಗ್ರ ದಾಳಿಯ ಬಳಿಕ ಭಾರತ ಸರ್ಕಾರ ಕಡಲತೀರ ಪ್ರದೇಶದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಈ ವರೆಗೂ 19.47 ಲಕ್ಷ ಮೀನುಗಾರರು ಬಯೋಮೆಟ್ರಿಕ್ ಗುರುತಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 18.60 ಲಕ್ಷ ಮೀನುಗಾರರಿಗೆ ಐಡಿ ಕಾರ್ಡ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.